Download Our App

Follow us

Home » ರಾಜ್ಯ » ರಾಜ್ಯದಲ್ಲಿ ನಾಳೆ ಎರಡನೇ ಹಂತದ ಚುನಾವಣೆ..!​​​

ರಾಜ್ಯದಲ್ಲಿ ನಾಳೆ ಎರಡನೇ ಹಂತದ ಚುನಾವಣೆ..!​​​

ಬೆಂಗಳೂರು : ರಾಜ್ಯದಲ್ಲಿ ನಾಳೆ 14 ಲೋಕಸಭೆ ಕ್ಷೇತ್ರಗಳ ಎರಡನೇ ಹಂತದ ಚುನಾವಣೆ ನಡೆಯಲಿದೆ. ಮೇ. 7ರಂದು ದೇಶದಲ್ಲಿ ಮೂರನೇ ಹಂತದ ಹಾಗೂ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನಕ್ಕೆ ವೇದಿಕೆ ಸಿದ್ದವಾಗುತ್ತಿದೆ.

ಎರಡನೇ ಹಂತದ ಚುನಾವಣೆ ಹಿನ್ನೆಲೆ ಬಹಿರಂಗ ಪ್ರಚಾರಕ್ಕೆ ನಿನ್ನೆ ಸಂಜೆ 6 ಗಂಟೆಗೆ ತೆರೆ ಬಿದ್ದಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯಲಿದ್ದು, 12 ರಾಜ್ಯಗಳ 94 ಕ್ಷೇತ್ರಗಳಿಗೆ ವೋಟಿಂಗ್​​​ ನಡೆಯಲಿದೆ. ರಾಜ್ಯದಲ್ಲಿ ಮತದಾನಕ್ಕೆ ಎಲ್ಲ ರೀತಿಯ ಸಿದ್ಧತೆ ನಡೆಯುತ್ತಿದ್ದು, 10 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಗಳು ನಾಳೆ ಕಾರ್ಯ ನಿರ್ವಹಿಸಲಿದ್ದಾರೆ.

ಮತಗಟ್ಟೆ ಸಿಬ್ಬಂದಿ ಇಂದು ಮಧ್ಯಾಹ್ನ ಎಲ್ಲಾ ಕ್ಷೇತ್ರಗಳಿಗೂ ತಲುಪಲಿದ್ದಾರೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್​​, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭೆ ಕ್ಷೇತ್ರಗಳ ಮತದಾನ ನಡೆಯಲಿದೆ. ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಮಂತ್ರಿಗಳು, ರಾಜ್ಯದ ಪ್ರಭಾವಿ ಮಂತ್ರಿಗಳ ಮಕ್ಕಳ ಭವಿಷ್ಯ ಬರೆಯಲಿದೆ ಈ ಎಲೆಕ್ಷನ್​​ನಲ್ಲಿ ನಿರ್ಧಾರವಾಗಲಿದೆ.

ಇದನ್ನೂ ಓದಿ : ಹಾಸನದಲ್ಲಿ ಪ್ರಜ್ವಲ್​ ಗೆದ್ದರೂ ಕ್ರಮಕೈಗೊಳ್ಳುತ್ತೇವೆ – ಆರ್​.ಅಶೋಕ್​..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here