ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ತವಾಡ ಗ್ರಾಮದ 41 ವರ್ಷದ ಮಲ್ಲಪ್ಪ ದೊಡ್ಡಕಲ್ಲನ್ನವರ ಎಂಬ ರೈತ ಮೃತಪಟ್ಟ ದುರ್ದೈವಿಯಾಗಿದ್ದಾರೆ.
ರೈತ ಮಲ್ಲಪ್ಪ ದೊಡ್ಡಕಲ್ಲನ್ನವರ ಬೆಳಗಾವಿ ಮಾರುಕಟ್ಟೆಗೆ ಟ್ರ್ಯಾಕ್ಟರ್ನಲ್ಲಿ ಕೊತ್ತುಂಬರಿ ಸೊಪ್ಪು ಸಾಗಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ರಭಸವಾಗಿ ಬಂದ ಗೂಡ್ಸ್ ವಾಹನ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದಿದೆ. ಗೂಡ್ಸ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕೊತ್ತಂಬರಿ ಸೊಪ್ಪು ಸಾಗಿಸುತ್ತಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ವಿಶ್ವದಲ್ಲಿ ಸುಳ್ಳು ಹೇಳುವ ಪಕ್ಷ ಬಿಜೆಪಿ, ಅದರಲ್ಲಿ ನಂ.1 ಪ್ರಹ್ಲಾದ ಜೋಶಿ : ಸಂತೋಷ್ ಲಾಡ್ ಕಿಡಿ..!
Post Views: 175