Download Our App

Follow us

Home » ಮೆಟ್ರೋ » ಬೆಂಗಳೂರು : ರಸ್ತೆ ಬದಿಯಲ್ಲಿ ತರಕಾರಿ ಮಾರುವವರ ಮೇಲೆ ಟ್ರಾಫಿಕ್ ಪೊಲೀಸ್ ದರ್ಪ..!

ಬೆಂಗಳೂರು : ರಸ್ತೆ ಬದಿಯಲ್ಲಿ ತರಕಾರಿ ಮಾರುವವರ ಮೇಲೆ ಟ್ರಾಫಿಕ್ ಪೊಲೀಸ್ ದರ್ಪ..!

ಬೆಂಗಳೂರು : ದುಡಿದು ತಿನ್ನೋರ ಮೇಲೆ ಪೊಲೀಸಪ್ಪ ದರ್ಪ ತೋರಿದ್ದಾರೆ. ತರಕಾರಿ ಮಾರೋ ವೇಳೆ ಪೊಲೀಸ್‌‌ ಅಂಗಡಿ ಎತ್ತಿಸಲು ಬಂದು ವ್ಯಾಪಾರಸ್ಥರ ತಕ್ಕಡಿ ಎಸೆದು ದರ್ಪ ತೋರಿದ್ದಾರೆ.

ನೆಲಕ್ಕೆ ಎಸೆದ ಪರಿಣಾಮ ತಕ್ಕಡಿ ಒಡೆದು ಹೋಗಿರುವ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ನಡೆದಿದೆ. ಪೊಲೀಸ್‌ ಕಾನ್ಸ್‌ಟೇಬಲ್‌ ನಾಗರಾಜ್ ವರ್ತನೆಗೆ ಸ್ಥಳೀಯ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಿಸಬೇಕೆಂದು ಹೈಕೋರ್ಟ್‌ ಸೂಚನೆ ನೀಡಿತ್ತು. ಕೋರ್ಟ್ ನಿಯಮ ಪಾಲಿಸಬೇಕಾಗಿರುವುದು ಎಲ್ಲರ ಕರ್ತವ್ಯ. ಹೀಗಾಗಿ ನಾಗರಾಜ್‌ ಕೂಡ ಬಂದು ವ್ಯಾಪಾರಿಗಳ ಬಳಿ ಬಂದು ಅಂಗಡಿ ಎತ್ತುವಂತೆ ಕೇಳಿದ್ದರು. ಉಪ್ಪಾರಪೇಟೆ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್ ನಾಗರಾಜ್ ಸಾರ್ವಜನಿಕ ಸ್ಥಳದಲ್ಲಿ ಈ ರೀತಿ ವರ್ತಿಸೋದು ಎಷ್ಟು ಸರಿ ಅಂತ ಸ್ಥಳೀಯ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

ಇದನ್ನೂ ಓದಿ : ಎಸ್ ಎಸ್ ಎಲ್ ಸಿ ಪ್ರಿಪರೇಟರಿ ಟೈಮ್ ಟೇಬಲ್ ನಲ್ಲಿ ಮುಸ್ಲಿಂ ಓಲೈಕೆ : ಬಿಜೆಪಿ ಆಕ್ರೋಶ..

Leave a Comment

DG Ad

RELATED LATEST NEWS

Top Headlines

ವಾಹನ ಸವಾರರೇ ಹುಷಾರ್… ಇನ್ಮುಂದೆ 130km ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸಿದರೆ ಬೀಳುತ್ತೆ ಎಫ್‌ಐಆರ್‌..!

ಬೆಂಗಳೂರು : ಇನ್ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿಮೀ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿದರೆ ಅಂತವರ ವಿರುದ್ಧ FIR ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ

Live Cricket

Add Your Heading Text Here