ಗದಗ : ಹಾಡಹಗಲೇ ಪತ್ನಿಯನ್ನ ಅಟ್ಟಾಡಿಸಿ ಮಚ್ಚಿನಿಂದ ಕೊಚ್ಚಿ ಕೊಲೆಮಾಡಲು ಯತ್ನಿಸಿರುವ ಘಟನೆ ಗದಗದಲ್ಲಿ ನಡೆದಿದೆ. ಮುಂಡರಗಿ ಪಟ್ಟಣದ ಅಂಚೆ ಕಚೇರಿ ಬಳಿ ಈ ಘಟನೆ ನಡೆದಿದ್ದು, ಗೀತಾ ಬೇಲೂರಪ್ಪ ಪೂಜಾರ ಹಲ್ಲೆಗೊಳಗಾದ ಮಹಿಳೆ.
ಕೌಟುಂಬಿಕ ಕಲಹ ಹಿನ್ನಲೆ ಬೇಲೂರಪ್ಪ ಪೂಜಾರ ಎಂಬಾತ ಪತ್ನಿಯನ್ನೇ ಕೊಲೆ ಮಾಡಲು ಮುಂದಾಗಿದ್ದು ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಮಹಿಳೆ ಗೀತಾ ಗಂಭೀರ ಗಾಯಗೊಂಡಿದ್ದು ಮುಂಡರಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಹಲ್ಲೆಗೆ ಒಳಗಾದ ಗೀತಾ ಬೇಲೂರಪ್ಪ ಪೂಜಾರ ಅವರು ಅಂಚೆ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ಸ್ಥಳಕ್ಕೆ ಮುಂಡರಗಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದು, ಆರೋಪಿ ಪತಿ ಬೇಲೂರಪ್ಪನನ್ನ ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ : ಸೋಷಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಪ್ರಚಾರ : ಪೋಸ್ಟ್ ವೈರಲ್ ಮಾಡಿದವರ ಮೇಲೆ ಕ್ರಮಕ್ಕೆ ಆಗ್ರಹಿಸಿ ದೂರು..!
Post Views: 239