ತುಮಕೂರು : ಹುಡುಗಿ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿಗಳ ನಡುವೆ ಕಿರಿಕ್ ನಡೆದ ಘಟನೆ ತುಮಕೂರು ನಗರದ ವಿದ್ಯಾನಿಧಿ ಪಿಯು ಕಾಲೇಜು ಬಳಿ ನಡೆದಿದೆ. ವಿದ್ಯಾರ್ಥಿಯೊಬ್ಬನಿಗೆ ಮನಬಂದಂತೆ ಹಲ್ಲೆ ನಡೆಸಿ ಪುಂಡಾಟ ಮರೆದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಮನೋಜ್ ಹಾಗೂ ಗಣೇಶ್ ಎಂಬುವವರು 2nd ಪಿಯುಸಿ ಓದುತ್ತಿರುವ ಜಯವರ್ಧನ್ ಮೇಲೆ ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ BMS ಕಾಲೇಜಿನಲ್ಲಿ ಡಿಗ್ರಿ ಮಾಡುತ್ತಿರುವ ಮನೋಜ್,
ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬಳನ್ನ ಪ್ರೀತಿಸುತ್ತಿದ್ದನು.
ಆ ಹುಡುಗಿ ಜೊತೆ ಜಯವರ್ಧನ್ ಮಾತನಾಡ್ತಾನೆ ಎಂಬ ವಿಚಾರಕ್ಕೆ ಮನೋಜ್ ಪೋನ್ನಲ್ಲಿ ಬೆದರಿಕೆ ಹಾಕಿದ್ದನು. ಅಲ್ದೇ ಕಾಲೇಜು ಬಳಿ ಬಂದು ಗಣೇಶ್ ಎಂಬಾತನ ಜೊತೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ಮಾಡುತ್ತಿದ್ದನ್ನ ನೋಡಿದ ಕಾಲೇಜಿನ ಬಸ್ ಚಾಲಕರು, ಮನೋಜ್ನನ್ನ ಹಿಡಿದು ಕಾಲೇಜು ಪ್ರಾಂಶುಪಾಲರಿಗೆ ಒಪ್ಪಿಸಿದ್ದಾರೆ. ಈ ವೇಳೆ ಜತೆಗೆ ಇದ್ದ ಸ್ನೇಹಿತ ಗಣೇಶ್ ನಾಪತ್ತೆಯಾಗಿದ್ದಾನೆ. ಇನ್ನು ಘಟನೆಯ ಸಂಬಂಧ ಜಯವರ್ಧನ್ ಪೋಷಕರಿಂದ ಮನೋಜ್ ವಿರುದ್ಧ ತುಮಕೂರಿನ NEPS ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ : ಕೋಟಿ ಕೋಟಿ ಇನ್ಶೂರೆನ್ಸ್ ಹಣಕ್ಕೆ ಅಮಾಯಕನನ್ನು ಕೊಲೆಗೈದ ದಂಪತಿ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ..!