Download Our App

Follow us

Home » ಅಪರಾಧ » ಖಾಲಿ ಜಾಗದಲ್ಲಿ ಕಸವಿಟ್ಟಿದ್ದಕ್ಕೆ ಅಪರಿಚಿತ ವ್ಯಕ್ತಿಯಿಂದ ಕಿರುತೆರೆ ನಟನ ಮೇಲೆ ಹ*ಲ್ಲೆ – ಪ್ರಕರಣ ದಾಖಲು..!

ಖಾಲಿ ಜಾಗದಲ್ಲಿ ಕಸವಿಟ್ಟಿದ್ದಕ್ಕೆ ಅಪರಿಚಿತ ವ್ಯಕ್ತಿಯಿಂದ ಕಿರುತೆರೆ ನಟನ ಮೇಲೆ ಹ*ಲ್ಲೆ – ಪ್ರಕರಣ ದಾಖಲು..!

ಬೆಂಗಳೂರು : ಖಾಲಿ ಜಾಗದಲ್ಲಿ ಕಸವಿಟ್ಟಿದ್ದಕ್ಕೆ ಕಿರುತೆರೆ ನಟನಿಗೆ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಡಿ ಗ್ರೂಪ್ ಲೇಔಟ್​ನಲ್ಲಿ ನಡೆದಿದೆ. ಚರಿತ್ ಬಾಳಪ್ಪ ಹಲ್ಲೆಗೊಳಗಾದ ಕಿರುತೆರೆ ನಟನಾಗಿದ್ದು, ಪಕ್ಕದ ಮನೆಯ ಅಪರಿಚಿತ ವ್ಯಕ್ತಿಯೊಬ್ಬ ಚರಿತ್ ಬಾಳಪ್ಪ ಮೇಲೆ ಹಲ್ಲೆ ಮಾಡಿದ್ದಾಗಿ ಕಿರುತೆರೆ ನಟ ದೂರು ದಾಖಲಿಸಿದ್ದಾರೆ.

ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಗೆ ಬಾಳಪ್ಪ ದೂರು ನೀಡಿದ್ದಾರೆ. ಚರಿತ್ ಬಾಳಪ್ಪ ಶೂಟಿಂಗ್ ಹೋಗುವ ವೇಳೆ ಖಾಲಿ ಜಾಗದಲ್ಲಿ ಕಸ ಇಟ್ಟಿದ್ದಾರೆ. ಈ ವೇಳೆ ಅದೇ ಏರಿಯಾದ ಅಪರಿಚಿತ ವ್ಯಕ್ತಿ ಪ್ರಶ್ನಿಸಿದ್ದಾರೆ. ಬಳಿಕ ಇಬ್ಬರ ನಡುವೆ ವಾಗ್ವಾದ ನಡೆದಿದೆ. ನಂತರ ಬಾಳಪ್ಪ ಮೇಲೆ ಅಪರಿಚಿತ ವ್ಯಕ್ತಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾನೆ ಎಂದು ಅರೋಪಿಸಲಾಗಿದೆ.

ಅಪರಿಚಿತ ವ್ಯಕ್ತಿ ನಟನಿಗೆ ಕಿರುಬೆರಳಿಗೆ ಗಾಯ ಮಾಡಿದ್ದು, ಕಳೆದ ಫೆಬ್ರವರಿ 23ನೇ ತಾರೀಖು ಈ ಘಟನೆ ನಡೆದಿದೆ. ಶೂಟಿಂಗ್ ಇರುವ ಕಾರಣ ಚರಿತ್ ಬಾಳಪ್ಪ ತಡವಾಗಿ ದೂರು ನೀಡಿದ್ದು, ನಟನ ದೂರಿನ ಆದಾರದ ಮೆಲೆ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ವಿಶ್ವವಿಖ್ಯಾತ ಕಾಜಿರಂಗ ಅಭಯಾರಣ್ಯದಲ್ಲಿ ಪ್ರಧಾನಿ ಮೋದಿ ಬೆಳ್ಳಂಬೆಳಗ್ಗೆ ಮೆಗಾ ಸಫಾರಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಸವಾರ ದುರ್ಮರಣ..!

ಬೆಂಗಳೂರು : ನಗರದಲ್ಲಿ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಸವಾರ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್ 32 ವರ್ಷ ಅಪಘಾತದಲ್ಲಿ

Live Cricket

Add Your Heading Text Here