ಉಡುಪಿ : ಆನ್ಲೈನ್ ಟ್ರೇಡಿಂಗ್ ಹೆಸರಲ್ಲಿ ವಂಚನೆ ಮಾಡಿದ ನಾಲ್ವರು ಆರೋಪಿಗಳನ್ನು ಉಡುಪಿ ಸೆನ್ ಠಾಣೆಯ ಪೊಲೀಸರು ಬಂಧಿಸಿ 13 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ.
ಉಪೇಂದ್ರ ಭಟ್ ಎಂಬವರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ವಾಟ್ಸ್ಯಾಪ್ ನಲ್ಲಿ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ಮೆಂಟ್ ಗ್ರೂಪ್ಗೆ ಸೇರಿಸಿ, ಟ್ರೇಡಿಂಗ್ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ ಉಪೇಂದ್ರ ಭಟ್ರನ್ನು ನಂಬಿಸಿದ್ದಾರೆ. ಆದಾದ ಬಳಿಕ ಮೋತಿಲಾಲ್ ಒಸ್ವಾಲ್ ಪ್ರೈವೇಟ್ ವೆಲ್ತ್ ಮ್ಯಾನೇಜ್ ಮೆಂಟ್ ಗ್ರೂಪ್ನ ಅಕೌಂಟ್ ನಂಬರ್ ನೀಡಿ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಒಟ್ಟು 33,10,000 ಹಣ ಖಾತೆಗೆ ಹಾಕಿಸಿಕೊಂಡು ಉಪೇಂದ್ರ ಭಟ್ಗೆ ವಂಚಿಸಿದ್ದರು.
ಈ ಬಗ್ಗೆ ಉಪೇಂದ್ರ ಭಟ್ ನೀಡಿದ ದೂರಿನಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಶೇಷ ತಂಡ ರಚಿಸಿ ತನಿಖೆ ಆರಂಭಿಸಿದ ಪೊಲೀಸರು ಪುತ್ತೂರಿನ ಮಹಮ್ಮದ್ ಮುಸ್ತಫಾ ಪಿ. (36), ಕುಂಬ್ಳೆಯ ಖಾಲೆಡ್ಜ್. ಬಿ, (39 ), ಕಾಸರಗೋಡಿನ ಮೊಹಮ್ಮದ್ ಸಫಾನ್ ಕೆ.ಎ., (22) , ಮಂಗಳೂರಿನ ಸತೀಶ್ ಶೇಟ್(22 )ರನ್ನು ವಶಕ್ಕೆ ಪಡೆದು ಅವರಿಂದ 5 ಮೊಬೈಲ್ ಹಾಗೂ 13 ಲಕ್ಷ ರೂ.ನಗದು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಪ್ರಮುಖ ಸೂತ್ರದಾರಿಗಳು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ಸಾವಿನ ಮನೆಗೆ ಬಂದು ಸ್ನೇಹಿತನಿಂದಲೇ ಕೊಲೆಯಾದ ವ್ಯಕ್ತಿ – ಅಸಲಿಗೆ ಆಗಿದ್ದೇನು?