Download Our App

Follow us

Home » ಜಿಲ್ಲೆ » ಉತ್ತರ ಕನ್ನಡ, ಕರಾವಳಿ ಭಾಗದಲ್ಲಿ ಮುಂದುವರೆದ ವರುಣನ ಆರ್ಭಟ : ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ..!

ಉತ್ತರ ಕನ್ನಡ, ಕರಾವಳಿ ಭಾಗದಲ್ಲಿ ಮುಂದುವರೆದ ವರುಣನ ಆರ್ಭಟ : ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ..!

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇನ್ನೂ ಮುಂದುವರೆದಿದೆ. ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ನಿರಂತರ ಮಳೆ ಸುರಿಯುತ್ತಿರೋದ್ರಿಂದ ಹಳ್ಳಕೊಳ್ಳಗಳು ಭರ್ತಿಯಾಗಿ ಹರಿಯುತ್ತಿವೆ.

ನದಿ ನೀರಿಯ ಪ್ರಮಾಣ ಹೆಚ್ಚಿರೋದ್ರಿಂದ ಕೆಲವೆಡೆ ನದಿಗಳ ತೀರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ನೇತ್ರಾವತಿ ಸೇರಿದಂತೆ ಕರಾವಳಿ ಭಾಗದ ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಇಂದೂ ಸ್ಕೂಲ್​​-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕಾರವಾರ, ಕುಮಟಾ, ಭಟ್ಕಳ ಹಾಗೂ ಹೊನ್ನಾವರ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗ್ತಿರೋ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ 2 ದಿನಗಳ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಅಹಿತಕರ ಘಟನೆಗಳು ನಡೆಯದೇ ಇರಲಿ ಅಂತ ಇಂದು ಉಡುಪಿಯ ಎಲ್ಲ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಇಂದು ಕೂಡ ಬಿರುಸಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಇನ್ನೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಟ್ಟಾರೆ, ಕರುನಾಡಿನಲ್ಲಿ ಕೊಂಚ ಲೇಟ್​ ಆದ್ರೂ ಮಳೆರಾಯ ಅಬ್ಬರ ಜೋರಾಗಿದ್ದು, ಅವಾಂತರಗಳನ್ನು ಸೃಷ್ಟಿಸಿದ್ದಾನೆ.

ಇದನ್ನೂ ಓದಿ : ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇಂದಿನಿಂದ ಈ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ ಆರಂಭ – ಎಲ್ಲೆಲ್ಲಿ?

Leave a Comment

DG Ad

RELATED LATEST NEWS

Top Headlines

ದರ್ಶನ್​ ಕೇಸ್​ನ​​ಲ್ಲಿ ಪೊಲೀಸರಿಂದ ಮಿಸ್ಟೇಕ್​​​ ಮೇಲೆ ಮಿಸ್ಟೇಕ್ – ಸ್ಫೋಟಕ ಮಾಹಿತಿ ಬಿಚ್ಚಿಟ್ಟ ವಕೀಲ ಸಿ.ವಿ. ನಾಗೇಶ್..!

ಬೆಂಗಳೂರು : ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು 57ನೇ ಸಿಸಿಹೆಚ್ ಕೋರ್ಟ್​​ನಲ್ಲಿ ನಡೆದಿದ್ದು, ದರ್ಶನ್ ಪರ ಹಿರಿಯ ವಕೀಲ

Live Cricket

Add Your Heading Text Here