Download Our App

Follow us

Home » ಸಿನಿಮಾ » ಚಿತ್ರರಂಗಕ್ಕೆ ಗುಡ್​ ಬೈ ಹೇಳ್ತಾರ ರಮ್ಯಾ? ಈ ತರ ನಿರ್ಧಾರಕ್ಕೆ ಕಾರಣವೇನು ?

ಚಿತ್ರರಂಗಕ್ಕೆ ಗುಡ್​ ಬೈ ಹೇಳ್ತಾರ ರಮ್ಯಾ? ಈ ತರ ನಿರ್ಧಾರಕ್ಕೆ ಕಾರಣವೇನು ?

ಸಾಂಡಲ್​ವುಡ್ ಕ್ವೀನ್ ರಮ್ಯಾ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುವುದರ ಜೊತೆಗೆ ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ರಮ್ಯಾ ಅವರು ನಂತರ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲೂ ಮಿಂಚಿದ್ದರು.

ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ಮೋಹಕ ತಾರೆ ರಮ್ಯಾ ಆರೇಳು ವರ್ಷದಿಂದ ಚಿತ್ರರಂಗದಿಂದ ದೂರ ಉಳಿದಿದ್ದರು. ಆದರೆ ಒಂದು ವರ್ಷದ  ಹಿಂದೆಯಷ್ಟೇ ರಮ್ಯಾ  ಮತ್ತೆ ಬೆಳ್ಳಿಪರದೆಗೆ ಕಮ್‌ಬ್ಯಾಕ್ ಆಗುತ್ತಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಫ್ಯಾನ್ಸ್ ಖುಷಿಪಟ್ಟಿದ್ದರು. ಇದೀಗ ಮತ್ತೆ ಫ್ಯಾನ್ಸ್​ಗಳಿಗೆ ನಿರಾಸೆ ಮೂಡಿಸಿದ ರಮ್ಯಾ ಅವರು ಬಹುನಿರೀಕ್ಷತ ಉತ್ತರಕಾಂಡ ಚಿತ್ರದಿಂದ ಹಿಂದೆ ಸರಿದಿದ್ದಾರೆ.

ಹೌದು, ಈ ಬಗ್ಗೆ ಸ್ವತಃ ರಮ್ಯಾ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಡೇಟ್ಸ್ ಹೊಂದಾಣಿಕೆ ಆಗದ ಕಾರಣ, ನಾನು ಉತ್ತರಕಾಂಡ ಸಿನಿಮಾದಲ್ಲಿ ನಟಿಸುತ್ತಿಲ್ಲ. ನನ್ನ ಸಿನಿಮಾ ಮತ್ತು ರಾಜಕೀಯ ಕೆಲಸಗಳನ್ನು ಸದ್ಯ ಕಾಯ್ದಿರಿಸಿದ್ದೇನೆ. ಆದರೆ ಚಿತ್ರತಂಡಕ್ಕೆ ಶುಭವಾಗಲಿ ಎಂದು ರಮ್ಯಾ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. 

ಉತ್ತರಕಾಂಡ ಚಿತ್ರದಲ್ಲಿ ಡಾಲಿ ಧನಂಜಯ್‌ಗೆ ನಾಯಕಿಯಾಗಿ ರಮ್ಯಾ ಕಾಣಿಸಿಕೊಳ್ಳುವುದಾಗಿ ಕಳೆದ ವರ್ಷ ಘೋಷಣೆಯಾಗಿತ್ತು. ಅದ್ಧೂರಿಯಾಗಿ ಮುಹೂರ್ತ ಕೂಡ ನೆರವೇರಿತ್ತು. ಚಿತ್ರದಲ್ಲಿ ಶಿವಣ್ಣ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಆದರೆ ಈಗ ರಮ್ಯಾ ಚಿತ್ರದಿಂದ ಹೊರನಡೆದಿದ್ದಾರೆ.

ಈಗಾಗಲೇ ಉತ್ತರಕಾಂಡ ಚಿತ್ರದ ಚಿತ್ರೀಕರಣ ಶುರುವಾಗಿದ್ದು, ಚಿತ್ರಕ್ಕೆ ‘ರತ್ನನ್‌ ಪ್ರಪಂಚ’ ಖ್ಯಾತಿಯ ರೋಹಿತ್‌ ಪದಕಿ ನಿರ್ದೇಶನ ಮಾಡುತ್ತಿದ್ದಾರೆ. ಕೆಆರ್‌ಜಿ ಸಂಸ್ಥೆ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ : ‘ಕೃಷ್ಣಾವತಾರ’ ಚಿತ್ರದ ಟೈಟಲ್ ಪೋಸ್ಟರ್ ರಿಲೀಸ್ ಮಾಡಿದ ಆರು ಕೃಷ್ಣರು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here