Download Our App

Follow us

Home » ಅಪರಾಧ » ವಾಲ್ಮೀಕಿ ಹಗರಣ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಸೇರಿದ ಮಾಜಿ ಮಂತ್ರಿ ಬಿ.ನಾಗೇಂದ್ರ..!

ವಾಲ್ಮೀಕಿ ಹಗರಣ ಕೇಸ್​ನಲ್ಲಿ ಪರಪ್ಪನ ಅಗ್ರಹಾರ ಸೇರಿದ ಮಾಜಿ ಮಂತ್ರಿ ಬಿ.ನಾಗೇಂದ್ರ..!

ಬೆಂಗಳೂರು : ವಾಲ್ಮೀಕಿ ಹಗರಣ ಕೇಸ್​​ನಲ್ಲಿ ಮಾಜಿ ಮಂತ್ರಿ ಬಿ.ನಾಗೇಂದ್ರ ಪರಪ್ಪನ ಅಗ್ರಹಾರ ಸೇರಿದ್ದಾರೆ. ನಾಗೇಂದ್ರಗೆ ಆಗಸ್ಟ್​ 3ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

ಈ ಹಗರಣ ಕೇಸ್‌ ಸಂಬಂಧ ಜಾರಿ ನಿರ್ದೇಶನಾಲಯದ (ED) ತಂಡ ನಾಗೇಂದ್ರ ಅವರ ಮನೆಗೆ ದಾಳಿ ಮಾಡಿತ್ತು. ಬಳಿಕ ಮಾಜಿ ಸಚಿವರನ್ನ ED ವಶಕ್ಕೆ ಪಡೆದಿದ್ದ ಅಧಿಕಾರಿಗಳು ಸತತ ವಿಚಾರಣೆಗೆ ಒಳಪಡಿಸಿದ್ದರು. ವಿಶೇಷ ನ್ಯಾಯಾಲಯ ಎರಡನೇ ಬಾರಿ 5 ದಿನ ಕಸ್ಟಡಿಗೆ ನೀಡಿದ್ದ ಹಿನ್ನೆಯಲ್ಲಿ ED ಅಧಿಕಾರಿಗಳು ಕಳೆದ 10 ದಿನಗಳಿಂದ ನಾಗೇಂದ್ರರನ್ನು ವಿಚಾರಣೆ ಮಾಡುತ್ತಿತ್ತು.

ಆದರೆ ಇಂದು ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆಯಲ್ಲಿ ED ಅಧಿಕಾರಿಗಳು ಕೋರ್ಟ್​ಗೆ ಹಾಜರು ಪಡಿಸಿದ್ದರು. ಇದೀಗ ವಾದ-ಪ್ರತಿವಾದ ಆಲಿಸಿದ ಕೋರ್ಟ್ ನಾಗೇಂದ್ರಗೆ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ : ನಾಳೆ ಮೋದಿ 3.0 ಸರ್ಕಾರದ ಮೊದಲ ಬಜೆಟ್​ – ಇತಿಹಾಸ ಸೃಷ್ಟಿಗೆ ಸಜ್ಜಾದ ಸಚಿವೆ ನಿರ್ಮಲಾ ಸೀತಾರಾಮನ್​​​..!

Leave a Comment

DG Ad

RELATED LATEST NEWS

Top Headlines

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಡ್ರೆಸ್ ಕೋಡ್ ಜಾರಿ – ದೇವರ ದರ್ಶನಕ್ಕೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ..!

ಚಿಕ್ಕಮಗಳೂರು : ಇತ್ತೀಚೆಗೆ ಶೃಂಗೇರಿಯ ಶ್ರೀ ಶಾರದಾಂಬೆ ಸನ್ನಿಧಾನದಲ್ಲಿ ಹಾಗೂ ಸುತ್ತಲಿನ ದೇವಸ್ಥಾನಗಳಲ್ಲಿ ಡ್ರೆಸ್ ಕೋಡ್ ಜಾರಿಯಾಗಿತ್ತು. ಇದೀಗ ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹೊರನಾಡು ಶ್ರೀ

Live Cricket

Add Your Heading Text Here