ವಿಜಯಪುರ : ಕುಡಿಯುವ ನೀರಿಗಾಗಿ ಯುವಕನೊಬ್ಬ ಟವರ್ ಏರಿ ಹುಚ್ಚಾಟ ಮೆರೆದಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ಸತೀಶ್ ಚಂದ್ರಶೇಖರ ಕಡಣಿ ಎಂಬಾತ ಅರೆ ಬೆತ್ತಲಾಗಿ ಇಂಡಿ ಪಟ್ಟಣದ ಬಸವೇಶ್ವರ ಸರ್ಕಲ್ನಲ್ಲಿರೋ ಮೊಬೈಲ್ ಟವರ್ ಏರಿ ಹೈಡ್ರಾಮಾ ಸೃಷ್ಟಿಸಿದ್ದಾನೆ.
ವಿಜಯಪುರದ ತೆಗ್ಗಿಹಳ್ಳಿ ಗ್ರಾಮದಲ್ಲಿ ಸುಮಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೆ ಈ ಬಗ್ಗೆ ಹಲವು ಬಾರಿ ಪಿಡಿಒ ಮತ್ತು ತಾಲ್ಲೂಕು ಅಧಿಕಾರಿಗಳ ಗಮನಕ್ಕೆ ತಂದ್ರೂ ಕ್ರಮ ವಹಿಸಿಲ್ಲ ಇದರಿಂದ ಸತೀಶ್ ಬೇಸತ್ತು, ಅಧಿಕಾರಿಗಳ ಗಮನ ಸೆಳೆಯಲು ಬೆಳಗ್ಗೆ 4 ಗಂಟೆಗೆ ಮೊಬೈಲ್ ಟವರ್ ಏರಿದ್ದಾನೆ.
ಯುವಕ 250 ಅಡಿ ಎತ್ತರದ ಟವರ್ನ ತುದಿಗೆ ಏರಿದ್ದಾನೆ. ಕೆಳಗೆ ಬರವಂತೆ ಎಷ್ಟೇ ಮನವಿ ಮಾಡಿದರೂ ಆತ ಕೆಳಗಿಳಿದಿಲ್ಲ. ನನಗೆ ನನ್ನೂರಿನ ಸಮಸ್ಯೆ ಬಗೆಹರಿಯಬೇಕು, ಸಂಬಂಧಪಟ್ಟವರು ಇಲ್ಲಿಗೆ ಬಂದು ಭರವಸೆ ಕೊಡಬೇಕು. ಆಗ ಮಾತ್ರ ಇಳಿಯುತ್ತೇನೆ ಎಂದು ಹೇಳಿದ್ದಾನೆ. ಈ ವೇಳೆ ಟವರ್ ಹತ್ತಿ ಆತನನ್ನು ಕಾಪಾಡಲು ಮುಂದಾದರೆ, ಟವರ್ನಿಂದ ಹಾರಿ ಬಿಡುವುದಾಗಿ ಬೆದರಿಸಿದ್ದಾನೆ. ಕೂಡಲೇ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ಮಾಹಿತಿಯನ್ನು ನೀಡಿದ್ದಾರೆ. ನಂತರ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಯುವಕನನ್ನು ಕೆಳಗಿಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಚುನಾವಣಾಧಿಕಾರಿಗಳಿಗೆ ಬೇಕಿದೆ 1700 ವೆಹಿಕಲ್ಸ್ : ವಾಹನಗಳಿಗೆ ಫುಲ್ ಡಿಮ್ಯಾಂಡ್..!