Download Our App

Follow us

Home » ಸಿನಿಮಾ » ಕಿರುತೆರೆಯ ಖ್ಯಾತ ನಟ ವಿಕಾಸ್​ ಸೇಥಿ ಹೃದಯಾಘಾತದಿಂದ ನಿಧನ..!

ಕಿರುತೆರೆಯ ಖ್ಯಾತ ನಟ ವಿಕಾಸ್​ ಸೇಥಿ ಹೃದಯಾಘಾತದಿಂದ ನಿಧನ..!

ಹಿಂದಿ ಸಿನಿಮಾ ಹಾಗೂ ಸೀರಿಯಲ್​ಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದ ನಟ ವಿಕಾಸ್​ ಸೇಥಿ ಅವರು ಹೃದಯಾಘಾತದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್​ ಸಿನಿಮಾ, ಸೀರಿಯಲ್​ಗಳಲ್ಲಿ ತಮ್ಮದೇ ರೀತಿಯಲ್ಲಿ ಛಾಪು ಮೂಡಿಸಿದ್ದ ನಟ ವಿಕಾಸ್ ಸೇಥಿ ತಮ್ಮ 48ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.

ವಿಕಾಸ್​ ಸೇಥಿ ಅವರಿಗೆ ನಿದ್ರೆಯಲ್ಲಿ ಇರುವಾಗಲೇ ಹೃದಯಾಘಾತ ಆಗಿದೆ. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಾಗಲೇ ಅವರ ಉಸಿರು ನಿಂತಿತ್ತು. ಈ ವಿಷಯ ತಿಳಿದ ಅವರ ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ವಿಕಾಸ್ ಸೇಥಿ ಅವರು ಸಕ್ರಿಯರಾಗಿದ್ದಾರೆ. ಸೀರಿಯಲ್​ಗಳು ಮಾತ್ರವಲ್ಲದೇ ರಿಯಾಲಿಟಿ ಶೋಗಳಲ್ಲೂ ಸ್ಪರ್ಧಿಸಿ ಅವರು ಹೆಸರು ಗಳಿಸಿದ್ದರು.

ವಿಕಾಸ್ ಸೇಥಿ 90ರ ದಶಕದ ಪ್ರಸಿದ್ಧ ನಟರಲ್ಲಿ ಒಬ್ಬರು. ಕ್ಯೂಂಕಿ ಸಾಸ್ ಬಿ ಕಭಿ ಬಹು ಥಿ, ಕಸೌಟಿ ಜಿಂದಗಿ ಕೆ, ಕಹಿ ತೋ ಹೋಗಾ, ಕೆ. ಸ್ಟ್ರೀಟ್​ ಪಾಲಿ ಹಿಲ್​, ಹಮಾರಿ ಬೇಟಿಯೋಂಕಾ ವಿವಾಹ್, ಡರ್​ ಸಬ್ಕೋ ಲಗ್ತಾ ಹೈ, ಸಂಸ್ಕಾರ್​ ಲಕ್ಷ್ಮಿ, ಸರುರಾಲ್​ ಸಿಮರ್​ ಕಾ ಮುಂತಾದ ಧಾರಾವಾಹಿಗಳಲ್ಲಿ ವಿಕಾಸ್​ ಸೇಥಿ ನಟಿಸಿದ್ದರು. ‘ದೀವಾನಾಪನ್​’, ‘ಕಭಿ ಖುಷಿ ಕಭಿ ಗಮ್​’, ‘ಓಪ್ಸ್​’, ‘ಇಸ್ಮಾರ್ಟ್​ ಶಂಕರ್​’ ಮುಂತಾದ ಸಿನಿಮಾಗಳಲ್ಲಿ ಕೂಡ ವಿಕಾಸ್​ ಸೇಥಿ ಅವರು ಅಭಿನಯಿಸಿದ್ದರು.

ಇನ್ನು ವಿಕಾಸ್​ ಸೇಥಿ 2018 ರಲ್ಲಿ ಜಾನ್ವಿ ಸೇಥಿ ಅವರನ್ನು ವಿವಾಹವಾದರು. ಜಾನ್ವಿಯನ್ನು ಮದುವೆಯಾದ ನಂತರ ವಿಕಾಸ್ ಅವಳಿ ಮಕ್ಕಳ ತಂದೆಯಾದರು. ಇನ್ನು ಸೋಷಿಯಲ್ ಮೀಡಿಯಾದಲ್ಲಿ ವಿಕಾಸ್​ ತುಂಬಾನೇ ಸಕ್ರಿಯರಾಗಿದ್ದರು. ತಮ್ಮ ಹೆಂಡತಿ ಮತ್ತು ಮಕ್ಕಳೊಂದಿಗೆ ಅನೇಕ ಪೋಸ್ಟ್‌ಗಳನ್ನು ಸಹ ನಟ ಹಂಚಿಕೊಳ್ಳುತ್ತಿದ್ದರು. ಆದರೆ, ಕಳೆದ ನಾಲ್ಕು ತಿಂಗಳಿಂದ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಯಾವುದೇ ಪೋಸ್ಟ್ ಅನ್ನು ಸಹ ಹಂಚಿಕೊಂಡಿರಲಿಲ್ಲ.

ಇದನ್ನೂ ಓದಿ : ಯೂಟ್ಯೂಬ್ ನೋಡಿ ಆಪರೇಷನ್ ಮಾಡಿದ ನಕಲಿ ವೈದ್ಯ – ಬಾಲಕ ಸಾ*ವು..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here