Download Our App

Follow us

Home » ಜಿಲ್ಲೆ » ರೇಣುಕಾಸ್ವಾಮಿ ಕುಟುಂಬಕ್ಕೆ 1 ಲಕ್ಷ ನೆರವು ನೀಡಿದ ನಟ ವಿನೋದ್ ರಾಜ್ – ಹೇಳಿದ್ದೇನು?

ರೇಣುಕಾಸ್ವಾಮಿ ಕುಟುಂಬಕ್ಕೆ 1 ಲಕ್ಷ ನೆರವು ನೀಡಿದ ನಟ ವಿನೋದ್ ರಾಜ್ – ಹೇಳಿದ್ದೇನು?

ಚಿತ್ರದುರ್ಗ : ಚಿತ್ರದುರ್ಗದ ಮೃತ ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಇಂದು ಬೆಳಿಗ್ಗೆ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ವಿನೋದ್ ರಾಜ್ ಸಾಂತ್ವನ ಹೇಳಿ 1 ಲಕ್ಷ ರೂ. ಆರ್ಥಿಕ ನೆರವು ನೀಡಿದ್ದಾರೆ.

ಮೃತ ರೇಣುಕಾಸ್ವಾಮಿ ನಿವಾಸಕ್ಕೆ ತೆರಳಿ ಪೋಷಕರಿಗೆ ಮತ್ತು ರೇಣುಕಾಸ್ವಾಮಿ ಪತ್ನಿ ಸಹನಾಗೆ ವಿನೋದ್ ರಾಜ್ ಸಾಂತ್ವನ ಹೇಳಿದ್ದಾರೆ. ಬಳಿಕ ರೇಣುಕಾಸ್ವಾಮಿ ಪತ್ನಿ ಹೆಸರಿಗೆ 1 ಲಕ್ಷ ಚೆಕ್
ಕೊಡುವ ಮೂಲಕ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ್ದಾರೆ.

ರೇಣುಕಾಸ್ವಾಮಿ ಪೋಷಕರು ವಿನೋದ್​ ರಾಜ್ ​ಮುಂದೆ ಕಣ್ಣೀರಿಟ್ಟಿದ್ದು, ನಾವು ಸಂಧಾನಕ್ಕೆ ಮುಂದಾಗಿಲ್ಲ. ನನ್ನ ಮಗನಿಗೆ ನ್ಯಾಯ ಸಿಗಬೇಕು. ಮಗನನ್ನು ಕಳೆದುಕೊಂಡು ನಮ್ಮ ಕರುಳು ಕಿತ್ತು ಬರುತ್ತಿದೆ. ನಾವು ಬಹಳ ನೊಂದಿದ್ದೇವೆ. ನನ್ನ ಮನೆತನ ನಾಶವಾಗಿದೆ ಎಂದು ವಿನೋದ್​ ರಾಜ್​ ಮುಂದೆ ರೇಣುಕಾ ಫ್ಯಾಮಿಲಿ ನೋವು ತೋಡಿಕೊಂಡಿದೆ.

ರೇಣುಕಾಸ್ವಾಮಿ ಫ್ಯಾಮಿಲಿ ಭೇಟಿ ಬಳಿಕ ನಟ ವಿನೋದ್ ರಾಜ್ ಮಾತನಾಡಿ, ಮಗ ಹೋದಾಗಿಂದ ಕುಟುಂಬಸ್ಥರೆಲ್ಲಾ ನೋವಲ್ಲಿದ್ದಾರೆ. ಅವರಿಗೆ ಸಾಂತ್ವನ ಹೇಳುವ, ಧೈರ್ಯ ತುಂಬುವ ಮಾತನ್ನು ಹೇಳಿದ್ದೇನೆ.

ಇನ್ನು ದರ್ಶನ್​​ ಇರುವ ಸ್ಥಿತಿ ನೆನೆದು ಚಿತ್ರದುರ್ಗದಲ್ಲೂ ವಿನೋದ್ ರಾಜ್​ ಕಣ್ಣೀರು ಹಾಕಿದ್ದಾರೆ. ಜೈಲಿಗೆ ಹೋದಾಗ ದರ್ಶನ್​​ ನನ್ನನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ.
ಆ ಸ್ಥಿತಿಯಲ್ಲಿ ದರ್ಶನ್​​ ಅವರನ್ನು ನೋಡಲು ನನಗೆ ಆಗಲಿಲ್ಲ ಎಂದು ವಿನೋದ್ ರಾಜ್​ ಭಾವುಕರಾಗಿದ್ದಾರೆ.

ಇದನ್ನೂ ಓದಿ : ನಮಗೆ 50-50 ರೂಲ್ಸ್​ನಲ್ಲಿ ಸೈಟ್ ಕೊಟ್ಟಿದ್ದೇ ಮುಡಾ – BJP-JDSಗೆ ದಾಖಲೆ ಸಮೇತ ತಿರುಗೇಟು ಕೊಟ್ಟ ಸಿಎಂ ಸಿದ್ದು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಸವಾರ ದುರ್ಮರಣ..!

ಬೆಂಗಳೂರು : ನಗರದಲ್ಲಿ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಸವಾರ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್ 32 ವರ್ಷ ಅಪಘಾತದಲ್ಲಿ

Live Cricket

Add Your Heading Text Here