ಕಲಬುರಗಿ : ಭಾರತ ತಂಡದ ಕ್ರಿಕೆಟ್ ಆಟಗಾರ್ತಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ತಮ್ಮ ಸ್ವಂತ ಊರಿಗೆ ಭೇಟಿ ಕೊಟ್ಟಿದ್ದಾರೆ. ಹೌದು, RCB ತಂಡದ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ಸ್ವಂತ ಊರು ಜೇವರ್ಗಿ ತಾಲ್ಲೂಕಿನ ಕೋಳಕೂರು ಗ್ರಾಮಕ್ಕೆ ಹೋಗಿದ್ದಾರೆ. ಈ ವೇಳೆ ಹುಟ್ಟೂರಿಗೆ ಬಂದ ಶ್ರೇಯಾಂಕಾ ಪಾಟೀಲ್ಗೆ ಹೆಮ್ಮೆಯಿಂದ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.
ಶ್ರೇಯಾಂಕಾ ಅವರ ಮೇಲೆ ಹೂ ಮಳೆ ಗೈದ ಗ್ರಾಮಸ್ಥರು ಶ್ರೀ ಸಿದ್ಧಬಸವೇಶ್ವರ ದೇವಸ್ಥಾನದವರೆಗೂ ಅದ್ಧೂರಿಯಾಗಿ ಮೆರವಣಿಗೆ ಮಾಡಿ ಸ್ವಾಗತಿಸಿದ್ದಾರೆ. ಬಳಿಕ ಸಿದ್ದಬಸವೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೇಯಾಂಕಾ ಪಾಟೀಲ್ಗೆ ಹಾಗೂ ಕುಟುಂಬಸ್ಥರಿಗೆ ಗ್ರಾಮಸ್ಥರು ಸನ್ಮಾನ ಮಾಡಿದ್ದಾರೆ. ಈ ವೇಳೆ ಮತ್ತಷ್ಟು ಉನ್ನತ ಮಟ್ಟಕ್ಕೆ ಶ್ರೇಯಾಂಕಾ ಪಾಟೀಲ್ ಬೆಳೆಯಲೆಂದು ಹಾರೈಸಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಭಾಗಿಯಾಗಿದ್ರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೇಯಾಂಕಾ ಪಾಟೀಲ್ ನನಗೆ ಚಿಕ್ಕಂದಿನಿಂದಲೂ ಸಾಧನೆ ಮಾಡ್ಬೇಕು, ನಮ್ಮೂರಿಗೆ ಕೀರ್ತಿ ತರಬೇಕು ಅನ್ನೋ ಆಸೆ ಇತ್ತು. ಆ ಕನಸು ನಿಮ್ಮೆಲ್ಲರ ಆಶೀರ್ವಾದಿಂದ ನೆರವೇರಿದೆ ಎಂದ್ರು. ಕಾಲೇಜು ವಿದ್ಯಾರ್ಥಿಗಳಿಗೆ ಸ್ಪೂರ್ತಿಧಾಯಕ ಮಾತಗಳನ್ನ ಹೇಳಿದ್ರು.
ಇದನ್ನೂ ಓದಿ : ವಿಜಯಪುರ : ಕೊಳವೆ ಬಾವಿಗೆ ತಲೆಕೆಳಗಾಗಿ ಬಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆ ಚುರುಕು – ಕ್ಯಾಮೆರಾದಲ್ಲಿ ಕಂದಮ್ಮನ ಚಲನವಲನ ಸೆರೆ..!