Download Our App

Follow us

Home » ರಾಜಕೀಯ » ಕಾಂಗ್ರೆಸ್​ನಲ್ಲೂ ಮಂಡ್ಯ ಗೆಲ್ಲುವ ರಣತಂತ್ರ : ಬೆಂಗಳೂರಿನಲ್ಲಿ ಒಕ್ಕಲಿಗ ಕಾಂಗ್ರೆಸ್ ನಾಯಕರ ಸಭೆ..!

ಕಾಂಗ್ರೆಸ್​ನಲ್ಲೂ ಮಂಡ್ಯ ಗೆಲ್ಲುವ ರಣತಂತ್ರ : ಬೆಂಗಳೂರಿನಲ್ಲಿ ಒಕ್ಕಲಿಗ ಕಾಂಗ್ರೆಸ್ ನಾಯಕರ ಸಭೆ..!

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದ್ದ ಕಾಂಗ್ರೆಸ್​​ಗೆ ಇದೀಗ ಮೊದಲು ರಾಜ್ಯಸಭೆಯಲ್ಲಿ ಗೆಲ್ಲುವ ಟಾಸ್ಕ್​ ಇದೆ. ಹಾಗಾಗಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಒಕ್ಕಲಿಗ ಕಾಂಗ್ರೆಸ್ ನಾಯಕರು ಮಹತ್ವದ ಸಭೆ ನಡೆಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಲೋಕಸಭಾ ಚುನಾವಣೆ ಕುರಿತಂತೆ ಮಹತ್ವದ ಚರ್ಚೆ ನಡೆಸಲಾಗ್ತಿದೆ. ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಸೀಟು ಗೆಲ್ಲುವ ಬಗ್ಗೆ ನಾಯಕರು ಚರ್ಚೆ ಮಾಡಲಿದ್ದಾರೆ. ಇನ್ನು, ಸಚಿವರಾದ ಎಂ.ಸಿ ಸುಧಾಕರ್, ಕೃಷ್ಣಬೈರೇಗೌಡ, ಚೆಲುವರಾಯಸ್ವಾಮಿ, ಶಾಸಕರಾದ ರವಿಕುಮಾರ್ ಗೌಡ, ಶರತ್ ಬಚ್ಚೇಗೌಡ ಸೇರಿ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಮಂಡ್ಯ ರಾಜಕಾರಣ ಇದೀಗ ತೀವ್ರ ಕುತೂಹಲ ಕೆರಳಿಸಿದೆ. ಹೌದು.. ಇಲ್ಲಿ ಕಾಂಗ್ರೆಸ್ ನಾಯಕರು ಸಭೆ ನಡೆಸುತ್ತಿದ್ದರೆ, ಮತ್ತೊಂದೆಡೆ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಅವರು ದಿಢೀರ್ ದೆಹಲಿಗೆ ತೆರಳಿ ತಡರಾತ್ರಿ ಅಮಿತ್​ ಶಾ, ಜೆ.ಪಿ.ನಡ್ಡಾ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ. 

ಮಾತುಕತೆ ಆರಂಭವಾಗ್ತಿದ್ದಂತೆ ಹೆಚ್​ಡಿಕೆ ಮಂಡ್ಯ ಕ್ಷೇತ್ರದ ಬಗ್ಗೆ ಪ್ರಸ್ತಾಪ ಮಾಡಿದ್ದು, ಮಂಡ್ಯ ಜೆಡಿಎಸ್​ನ ಭದ್ರಕೋಟೆ, ಅಸೆಂಬ್ಲಿಯಲ್ಲಿ ಹೆಚ್ಚು ಮತ ಬಂದಿವೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್​ಗೇ ಬಿಟ್ಟುಕೊಡಿ ಎಂದು ಹೆಚ್​ಡಿಕೆ ಪಟ್ಟು ಹಿಡಿದಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಖುದ್ದು ಪ್ರಧಾನಿ ಭೇಟಿ ಮಾಡಿದ್ದು, ಸುಲಮತಾ ಪ್ರಧಾನಿ ಭೇಟಿ ನಂತರ ಜೆಡಿಎಸ್ ಅಲರ್ಟ್ ಆಗಿದೆ.

ಇದನ್ನೂ ಓದಿ : ಬಡೇ ಮಿಯಾನ್ ಚೋಟೆ ಮಿಯಾನ್ ಟೈಟಲ್ ಟ್ರ್ಯಾಕ್ ರಿಲೀಸ್..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here