Download Our App

Follow us

Home » ಜಿಲ್ಲೆ » ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ರೀ ಓಪನ್ – ಪಟಾಕಿ ಸಿಡಿಸಿ ಸಂಭ್ರಮಿಸಿದ ನೌಕರರು..!

ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ರೀ ಓಪನ್ – ಪಟಾಕಿ ಸಿಡಿಸಿ ಸಂಭ್ರಮಿಸಿದ ನೌಕರರು..!

ಕಲಬುರಗಿ : ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಒಡೆತನದ ಸಕ್ಕರೆ ಕಾರ್ಖಾನೆ ಬಂದ್​ಗೆ ಪರಿಸರ ಮಾಲಿನ್ಯ ಮಂಡಳಿಯ ಅದೇಶಕ್ಕೆ ಹೈಕೋರ್ಟ್ ​ತಡೆಯಾಜ್ಞೆ ಹೊರಡಿಸಿದೆ. ಕೋರ್ಟ್​ ಅದೇಶ ಹೊರ ಬರ್ತಿದ್ದಂತೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಹೊರವಲಯದಲ್ಲಿರುವ ಸಿದ್ದಸಿರಿ ಸಕ್ಕರೆ ಕಾರ್ಖಾನೆಗೆ ಹಾಕಿದ್ದ ಬೀಗವನ್ನು ಅಧಿಕಾರಿಗಳು ತೆಗೆದಿದ್ದಾರೆ. ಇನ್ನು ಮುಚ್ಚಿದ್ದ ಕಾರ್ಖಾನೆ ಮತ್ತೆ ತೆರೆಯುತ್ತಿದ್ದಂತೆ ಸಕ್ಕರೆ ಕಾರ್ಖಾನೆ ಕಾರ್ಮಿಕರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಘಟನೆಯ ವಿವರ : ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಯತ್ನಾಳ್ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚಲು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿತ್ತು. ಈ ಕುರಿತು ಯತ್ನಾಳ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ ಹರಿ ಹಾಯ್ದಿದ್ದರು. ಯತ್ನಾಳ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದ ಕೈಗಾರಿಕೆ ಸಚಿವ ಎಂಬಿ ಪಾಟೀಲ್, ಕಾನೂನು ಪ್ರಕಾರ ಸರ್ಕಾರ ಕ್ರಮ ತೆಗೆದುಕೊಂಡಿರುತ್ತದೆ. ಒಂದು ವೇಳೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ನೋಟಿಸ್ ಸರಿ ಇಲ್ಲದಿದ್ದರೆ ನ್ಯಾಯಲಯದ ಮೊರೆ ಹೋಗಲಿ ಎಂದು ಸಲಹೆ ನೀಡಿದ್ದರು.

ಸೋಮವಾರ ಯತ್ನಾಳ್ ಸಿದ್ದಸಿರಿ ಸಕ್ಕರೆ ಹಾಗೂ ಎಥನಾಲ್ ಕಾರ್ಖಾನೆ ಬಂದ್​ಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್​ನಿಂದ ತಡೆ ಸಿಕ್ಕಿರುವ ಹಿನ್ನೆಲೆ ಎಕ್ಸ್​ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ ಯತ್ನಾಳ್, ಸತ್ಯದ ಗೆಲುವು ಎಂದು ಹೇಳಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರದ ಷಡ್ಯಂತ್ರಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದ್ದು ಬರೆದುಕೊಂಡಿದ್ದರು.

ಇದನ್ನೂ ಓದಿ : ರಾಯಚೂರು : ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳಿಂದ ಚಪ್ಪಲಿ ಹಾರ – ಸಿರವಾರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು ದಕ್ಷಿಣ ಘೋಷಣೆ ಬೆನ್ನಲ್ಲೇ ಇಂದು ಮಹತ್ವದ ಸಭೆ ಕರೆದ ಡಿಸಿಎಂ ಡಿಕೆಶಿ..!

ಬೆಂಗಳೂರು : ತೀವ್ರ ವಿರೋಧದ ನಡುವೆ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ

Live Cricket

Add Your Heading Text Here