Download Our App

Follow us

Home » ಸಿನಿಮಾ » ಯುವ ಪ್ರತಿಭೆಗಳ “ಕುಂಟೆಬಿಲ್ಲೆ” ಚಿತ್ರಕ್ಕೆ ಅದ್ದೂರಿ ಚಾಲನೆ..!

ಯುವ ಪ್ರತಿಭೆಗಳ “ಕುಂಟೆಬಿಲ್ಲೆ” ಚಿತ್ರಕ್ಕೆ ಅದ್ದೂರಿ ಚಾಲನೆ..!

ಈ ಮೊದಲು ದಕ್ಷ ಯಜ್ಞ, ತರ್ಲೆ ವಿಲೇಜ್, ಋತುಮತಿ ಚಿತ್ರ ಗಳನ್ನು ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ‌.ಎಸ್. ಅವರು ಕುಂಟೆಬಿಲ್ಲೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ‌. ಹತ್ತಕ್ಕೂ ಹೆಚ್ಚು ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ.

ಕುಂಟೆ ಬಿಲ್ಲೆ ಚಿತ್ರದ ಮೊದಲ ದೃಶ್ಯಕ್ಕೆ ಮೈಸೂರು ಯುವರಾಜ ಯದುವೀರ್ ಒಡೆಯರ್ ಕ್ಲಾಪ್ ಮಾಡಿದ್ದಾರೆ. ಇಡೀ ಚಿತ್ರ ತಂಡಕ್ಕೆ ಶುಭಕೋರಿದ್ದಾರೆ. ಈ ಮೂಲಕ ಸಿನಿಮಾ ತಂಡವೂ ಯುವರಾಜನ ಆಗಮನದಿಂದ ತುಂಬಾನೆ ಖುಷಿ ಕೂಡ ಪಟ್ಟಿದೆ. ಇನ್ನು ಸಿನಿಮಾ ತಂಡ ಡೈರೆಕ್ಟ್, ಹೀರೋ, ಹೀರೋಯಿನ್, ನಿರ್ಮಾಪಕರು ಹೀಗೆ ಎಲ್ಲರೂ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ಕುಂಟೆಬಿಲ್ಲೆ‌. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆ ಎಂದು ನಿರ್ದೇಶಕ ಸಿದ್ದೇಗೌಡ ತಿಳಿಸಿದ್ದಾರೆ.

ನಿರ್ಮಾಪಕ ಎಸ್.ಬಿ. ಶಿವು ಮಾತನಾಡಿ, ಜೀವಿತ ಕ್ರಿಯೇಷನ್ ನಿಂದ ಒಳ್ಳೆಯ ಸಿನಿಮಾ ಮಾಡಿದ್ದೇವೆ. ಯದು ಹೊಸ ಪ್ರತಿಭೆ ಆಗಿದ್ದು, ಅವರನ್ನೇ ನಾಯಕರನ್ನಾಗಿ ಮಾಡಿಕೊಂಡಿದ್ದೇವೆ ಎಂದರು.ಮತ್ತೊಬ್ಬ ನಿರ್ಮಾಪಕರಾಗಿರುವ ಕುಮಾರ್ ಗೌಡ ಅವರು ಮಾತನಾಡಿ, ನಿರ್ಮಾಣ ಕ್ಷೇತ್ರ ನನಗೆ ಹೊಸದು. 30 ವರ್ಷದ ಹಿಂದೆ ನಾನೊಬ್ಬ ಕಲಾವಿದ ಆಗಬೇಕು ಎಂದು ಬೆಂಗಳೂರಿಗೆ ಹೋಗಿದ್ದವನು‌. ಆದರೆ ಅದು ಸಾಧ್ಯವಾಗಿರಲಿಲ್ಲ‌. ಈಗ ಅದನ್ನು ನನ್ನ ಮಗನ ಮೂಲಕ ಈಡೇರಿಸಿಕೊಳ್ಳುತ್ತಿದ್ದೇನೆ. ನನ್ನ ಮಗನಿಗೆ ರಂಗಭೂಮಿ ಕಡೆಗೆ ಆಸಕ್ತಿ ಇತ್ತು. ಇದೀಗ ವಿದ್ಯಾಭ್ಯಾಸ ಮುಗಿಸಿ ನಟನೆ ಕಡೆಗೆ ಬರುತ್ತಿದ್ದಾನೆ. ಈಗ ನಾನೇ ಮುಂದೆ ನಿಂತು ನಿರ್ದೇಶಕ ಸಿದ್ದೇಗೌಡ ಅವರ ಗರಡಿಗೆ ಬಿಟ್ಟಿದ್ದೇವೆ. ನನ್ನ ಮಗನಿಗೆ ಹೊಂದುವಂತ ಒಳ್ಳೆಯ ಕತೆ ಇದೆ. ಸಿನಿಮಾ ಚೆನ್ನಾಗಿ ಮೂಡಿಬರಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಕುಂಟೆಬಿಲ್ಲೆ ಚಿತ್ರದ ನಾಯಕಿ ಮೇಘಶ್ರೀ ಒಂದು ಗ್ಯಾಪ್ ತೆಗೆದುಕೊಂಡು ಮತ್ತೆ ಬಂದಿದ್ದಾರೆ. ಈ ಹಿಂದೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಈಗ ಕುಂಟೆ ಬಿಲ್ಲೆ ಚಿತ್ರದ ಮೂಲಕ ಮತ್ತೊಮ್ಮೆ ಬಣ್ಣ ಹಚ್ಚಿದ್ದಾರೆ. ಹಳ್ಳಿಯೊಂದರಲ್ಲಿರೋ ಶ್ರೀಮಂತ ಕುಟುಂಬದ ಹುಡುಗಿಯ ಪಾತ್ರ ಮಾಡುತ್ತಿದ್ದಾರೆ.

ಚಿತ್ರದ ಕಥೆ ಕೇಳಿಯೂ ಇಷ್ಟ ಪಟ್ಟಿದ್ದಾರೆ. ಕನ್ನಡದಲ್ಲಿ ಈ ರೀತಿಯ ಕಥೆ ಕೇಳಿರಲಿಲ್ಲ ಅಂತ ಹೇಳಿಕೊಂಡಿದ್ದಾರೆ. ಒಳ್ಳೆ ತಂಡ ಸಿಕ್ಕಿರೋದಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಇದು ಬಿಟ್ರೆ, ಮೇಘಶ್ರೀ ಈ ಸಿನಿಮಾದಲ್ಲಿ ಒಳ್ಳೆ ಪಾತ್ರ ಮಾಡ್ತಿರೋ ಖುಷಿಯಲ್ಲಿಯೇ ಇದ್ದಾರೆ.

ಇದನ್ನೂ ಓದಿ : ಸಂತ್ರಸ್ತೆಯ ಕಿಡ್ನಾಪ್ ಕೇಸ್​ – ಹೆಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು ಮಂಜೂರು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here